ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ

WhatsApp
Telegram
Facebook
Twitter
LinkedIn

ಚಿತ್ರದುರ್ಗ: ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ ಮಾರಾಟ ಮಂಡಳಿ ವತಿಯಿಂದ ಕ್ವಿಂಟಲ್‌ಗೆ 8,682 ರೂ.ರಂತೆ ಖರೀದಿ ಮಾಡಲಿದ್ದಾರೆ.

ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ಆದ್ದರಿಂದ ಜಿಲ್ಲೆಯಲ್ಲಿ ಹೆಸರುಕಾಳು ಬೆಳೆಗಾರರು ಪ್ರತಿ ಎಕೆರೆಗೆ 2 ಕ್ವಿಂಟಲ್ ಹಾಗೂ ಗರಿಷ್ಟ 10 ಕ್ವಿಂಟಲ್‌ವರೆಗೆ ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಪ್ರಾರಂಭಿಸುವ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬಹುದಾಗಿದೆ.

News Desk   About Us
For Feedback - [email protected]

LATEST Post

WhatsApp Icon Telegram Icon